ಚೆನ್ನೈ: ಇಲ್ಲಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ಕಾರಣಗಳಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 172 ಪ್ರಯಾಣಿಕರು ಮತ್ತು ಏಳು ಮಂದಿ ಸಿಬ್ಬಂದಿ ಇದ್ದ ವಿಮಾನವು ಗುರುವಾರ ಸಂಜೆ ಇಲ್ಲಿಂದ ಹೊರಟ ಸ್ವಲ್ಪ ಸಮಯದ ಬಳಿಕ ವಾಪಸ್ ಬಂತು.
’ತಾಂತ್ರಿಕ ಸಮಸ್ಯೆಗಳ ಬಗ್ಗೆ ಪೈಲಟ್ ಅನುಮಾನ ವ್ಯಕ್ತಪಡಿಸಿದ ಕಾರಣ ವಿಮಾನವು ತುರ್ತು ಭೂ ಸ್ಪರ್ಶ ಮಾಡಿತು. ಅಗತ್ಯ ತಪಾಸಣೆಯ ನಂತರ ಮತ್ತೆ ದುಬೈಗೆ ಹೊರಟಿತು‘ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.