ಲಾರ್ನಾಕಾ (ಸೈಪ್ರಸ್): ವಿಶ್ವಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಶಾಂತಿಪಾಲಕರ ಕಾರ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಶ್ಲಾಘಿಸಿದರು.
ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಹೆಸರಿಟ್ಟಿರುವ ಸೈಪ್ರಸ್ನ ಬೀದಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತದ ಶಾಂತಿಪಾಲಕರ ಕೆಲಸವು ಪ್ರಪಂಚದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದೂ ಹೇಳಿದ್ದಾರೆ.
ಸೈಪ್ರಸ್ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಭಾರತದ ಶಾಂತಿಪಾಲಕರು ನೀಡಿರುವ ಗಣನೀಯ ಕೊಡುಗೆಯನ್ನು ಅಲ್ಲಿನ ವಿದೇಶಾಂಗ ಸಚಿವ ಅಯೋನಿಸ್ ಕಸೌಲಿಡಿಸ್ ಪ್ರಶಂಸಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.