ನವದೆಹಲಿ: ರಾಷ್ಟ್ರ ರಾಜಧಾನಿಯ ಹಲವೆಡೆ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ.
ಕೆಲವು ಸೆಕೆಂಡ್ಗಳ ಕಾಲ ಭೂಮಿ ತೀವ್ರವಾಗಿ ನಡುಗಿದೆ ಎನ್ನಲಾಗಿದೆ. ಏಕಾಏಕಿ ಭೂಮಿ ನಡುಗಿದ್ದರಿಂದ ಭೀತಿಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಭೂಕಂಪದ ತೀವ್ರತೆ 4.5ರಷ್ಟಿತ್ತು. ಕಂಪನ ಕೇಂದ್ರ ಹರಿಯಾಣದ ಗುರುಗ್ರಾಮದಿಂದ ನೈಋತ್ಯಕ್ಕೆ 63 ಕಿಲೋಮೀರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.
ರಾತ್ರಿ 7 ಗಂಟೆಗೆ ಭೂಮಿ ನಡುಗಿದೆ. ಭೂ ಮೇಲ್ಮೈಯಿಂದ 5 ಕಿಲೋಮೀಟರ್ನಷ್ಟು ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.