ನವದೆಹಲಿ: ದೆಹಲಿ–ಎನ್ಸಿಆರ್ ವಲಯ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಶುಕ್ರವಾರ ಸಂಜೆ ಭೂಕಂಪನ ಸಂಭವಿಸಿದೆ.
ಅಫ್ಗಾನಿಸ್ತಾನದ ಹಿಂದುಕುಷ್ ಪ್ರದೇಶದಲ್ಲಿ 6.3 ತೀವ್ರತೆಯ ಭೂಕಂಪನ ದಾಖಲಾಗಿದ್ದು, ಅದರ ಪ್ರಭಾವರಾಷ್ಟ್ರರಾಜಧಾನಿ ಮತ್ತು ಸುತ್ತಲಿನ ಪ್ರದೇಶದಲ್ಲೂ ಆಗಿದೆ. ಸುಮಾರು ಒಂದು ನಿಮಿಷದ ವರೆಗೂ ಕಂಪನದ ಅನುಭವವಾಗಿದೆ.
ದೆಹಲಿಯಲ್ಲಿ ಭೂಕಂಪನದ ಅನುಭವ ಆಗುತ್ತಿದ್ದಂತೆ ಜನರುಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿದ್ದಾರೆ. ಗುರುಗ್ರಾಮ, ನೋಯ್ಡಾ ಹಾಗೂ ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದಾಗಿ ಸಂಭವಿಸಿರುವ ಹಾನಿಯ ಬಗ್ಗೆ ಈವರೆಗೂ ತಿಳಿದು ಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.