ನವದೆಹಲಿ:ಶಿವಸೇನಾದ ಬಂಡಾಯ ಬಣ, ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಗುಂಪು ಬಿಲ್ಲು ಮತ್ತು ಬಾಣದ ಗುರುತನ್ನು ಪಕ್ಷದ ಚಿಹ್ನೆಯಾಗಿ ಹಂಚಿಕೆ ಮಾಡಬೇಕೆಂದು ಮನವಿ ಮಾಡಿದ್ದು, ಈ ಸಂಬಂಧ ಚುನಾವಣಾ ಆಯೋಗವು ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಶನಿವಾರ ಮಧ್ಯಾಹ್ನ 2 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಮಹಾರಾಷ್ಟ್ರದ ಪೂರ್ವ ಅಂಧೇರಿಯಲ್ಲಿ ವಿಧಾನಸಭಾ ಉಪ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಶಿಂದೆ ನೇತೃತ್ವದ ಬಣವು ಬಿಲ್ಲು ಮತ್ತು ಬಾಣವನ್ನು ಪಕ್ಷದ ಚಿಹ್ನೆಯನ್ನಾಗಿ ಹಂಚಿಕೆ ಮಾಡುವಂತೆ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಈ ಹಿನ್ನೆಲೆಯಲ್ಲಿ ಆಯೋಗವು ಠಾಕ್ರೆ ಬಣಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಿರ್ದೇಶನ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.