ನವದೆಹಲಿ: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಹಾಲಿ ಶಾಸಕ ಮೊಹಮ್ಮದ್ ಫೈಸಲ್ ಅವರಿಗೆ ಕವರಟ್ಟಿ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಯನ್ನು ಕೇರಳ ಹೈಕೋರ್ಟ್ ಅಮಾನತಿನಲ್ಲಿಟ್ಟ ಕಾರಣ ಲಕ್ಷದ್ವೀಪ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಚುನಾವಣಾ ಆಯೋಗವು ಸೋಮವಾರ ತಡೆಹಿಡಿದಿದೆ.
‘ಕೇರಳ ಹೈಕೋರ್ಟ್ನ ಆದೇಶವನ್ನು ಪರಿಗಣಿಸಿ ಉಪ ಚುನಾವಣೆಯನ್ನು ತಡೆಹಿಡಿದಿದ್ದೇವೆ ಮತ್ತು ಇದಕ್ಕಾಗಿ ಅಧಿಸೂಚನೆ ಹೊರಡಿಸುವುದನ್ನು ಮಂದೂಡಿದ್ದೇವೆ’ ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.
ನ್ಯಾಯಾಲಯವು ಶಿಕ್ಷೆ ವಿಧಿಸಿದ ಕಾರಣ ಫೈಸಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಈ ಕ್ಷೇತ್ರಕ್ಕೆ ಫೆಬ್ರುವರಿ 27 ರಂದು ಉಪಚುನಾವಣೆ ನಡೆಸುವುದಾಗಿ ಈಚೆಗೆ ಆಯೋಗವು ಘೋಷಿಸಿತ್ತು.
ಕವರಟ್ಟಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಫೈಸಲ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.