ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾ ಬಂಧನ

ಪಿಟಿಐ
Published 30 ನವೆಂಬರ್ 2022, 5:17 IST
Last Updated 30 ನವೆಂಬರ್ 2022, 5:17 IST
ಐಸ್ಟಾಕ್ ಚಿತ್ರ
ಐಸ್ಟಾಕ್ ಚಿತ್ರ   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾರನ್ನು ಬಂಧಿಸಿದ್ದಾರೆ.

ಅರೋರಾ, ಗುರುಗ್ರಾಮದ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ. ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಮಾಡಿದ 6ನೇ ಬಂಧನ ಇದಾಗಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯ ವಿವಿಧ ಸೆಕ್ಷನ್‌ಗಳಡಿ ಕಳೆದ ರಾತ್ರಿ ಅವರನ್ನು ಬಂಧಿಸಲಾಗಿದೆ.

ADVERTISEMENT

ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ.

ಸಿಬಿಐ ಎಫ್‌ಐಆರ್ ಆಧರಿಸಿ ಇ.ಡಿ ದೇಶದ ವಿವಿಧೆಡೆ ದಾಳಿಗಳನ್ನು ಸಂಘಟಿಸಿತ್ತು.

ಈ ಕುರಿತಂತೆ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದ ಸಿಬಿಐ, ಅಮಿತ್ ಅರೋರಾ ಮತ್ತು ಆತನ ಸಂಗಡಿಗರಾದ ದಿನೇಶ್ ಅರೋರಾ ಮತ್ತು ಅರ್ಜುನ್ ಪಾಂಡೆಯನ್ನು ಆರೋಪಿಗಳೆಂದು ಹೇಳಿತ್ತು. ಈ ಮೂವರೂ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತರು ಎಂದೂ ಸಿಬಿಐ ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.