ADVERTISEMENT

ರಾಜಸ್ಥಾನ | ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: 5 ಆರೋಪಿಗಳನ್ನು ಬಂಧಿಸಿದ ED

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2024, 9:36 IST
Last Updated 13 ಜನವರಿ 2024, 9:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ರಾಜಸ್ಥಾನದಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಐದು ಜನರನ್ನು ಬಂಧಿಸಿದೆ.

ಸುರೇಶ್ ಕುಮಾರ್, ವಿಜಯ ದಾಮೋರೆ, ಪುಖರಾಜ್, ಪೀರರಾಮ್‌ ಮತ್ತು ಅರುಣ್ ಶರ್ಮಾ ಬಂಧಿತ ಆರೋಪಿಗಳು. ಹಣ ಅಕ್ರಮ ವರ್ಗಾವಣೆ ಆರೋಪ ಇವರ ಮೇಲಿದೆ.

ಹಿರಿಯ ಶಿಕ್ಷಕರಿಗೆ ನಡೆಸುವ 2ನೇ ಗ್ರೇಡ್‌ನ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಹಗರಣ ಇದಾಗಿದೆ. ಬಂಧಿತರನ್ನು ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಆರೋಪಿಗಳನ್ನು 3 ದಿನಗಳ ಅವಧಿಗೆ ED ವಶಕ್ಕೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.