ನವದೆಹಲಿ: ಹಣ ದುರುಪಯೋಗ ಮಾಡಿಕೊಂಡು, ರಾಜಸ್ಥಾನದ 20 ಲಕ್ಷ ಜನರಿಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಆದರ್ಶ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ ಸೇರಿದ ₹365 ಕೋಟಿ ಮೊತ್ತದ ಆಸ್ತಿಯನ್ನುಜಾರಿ ನಿರ್ದೇಶನಾಲಯ (ಇ.ಡಿ) ವಶಪಡಿಸಿಕೊಂಡಿದೆ.
ಆದರ್ಶ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್ (ಎಸಿಸಿಎಸ್ಎಲ್) ಮತ್ತು ಅದರ ಪ್ರವರ್ತಕರಾದ ಮುಖೇಶ್ ಮೋದಿ, ರಾಹುಲ್ ಮೋದಿ ಮತ್ತು ಇತರರ ವಿರುದ್ಧ ರಾಜಸ್ಥಾನ ಪೊಲೀಸ್ ವಿಶೇಷ ಕಾರ್ಯಾಚರಣೆ ಪಡೆ (ಎಸ್ಒಜಿ) ದಾಖಲಿಸಿರುವ ಎಫ್ಐಆರ್ ಆಧರಿಸಿ, ಜಾರಿ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ.
‘ಸ್ವಾಧೀನಪಡಿಸಿಕೊಂಡಿರುವ ಸ್ವತ್ತುಗಳು ರಾಜಸ್ಥಾನ, ಹರಿಯಾಣ ಮತ್ತು ದೆಹಲಿಯಲ್ಲಿರುವ ಕೃಷಿ, ವಸತಿ ಮತ್ತು ವಾಣಿಜ್ಯ ನಿವೇಶನ ರೂಪದಲ್ಲಿವೆ. ಜತೆಗೆ, ನಿಶ್ಚಿತ ಠೇವಣಿ ಮತ್ತು ಬ್ಯಾಂಕ್ ಖಾತೆಗಳಲ್ಲಿದೆ‘ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.