ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ.
ಜೂನ್ 8ರಂದು ಸೋನಿಯಾಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಕೋವಿಡ್ ಸೋಂಕು ತಗುಲಿದೆ ಕಾರಣ, ಹೊಸ ದಿನಾಂಕ ಕೋರಿದ್ದರು. 23ರಂದು ನವದೆಹಲಿಯ ಇ.ಡಿ ಕಚೇರಿಯಲ್ಲಿ ಅವರ ಹೇಳಿಕೆ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸೋನಿಯಾ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಇದೇ 13ರಂದು ಪ್ರಶ್ನಿಸಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.