ನವದೆಹಲಿ: ಕೇರಳದಲ್ಲಿಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ (ಪಿಎಫ್ಐ) ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ಬುಧವಾರ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿಯು ಎರ್ನಾಕುಲಂ ಸೇರಿದಂತೆ ಇತರೆ ಸ್ಥಳಗಳಲ್ಲಿ ಶೋಧ ನಡೆಸಿದೆ. ಕೇಂದ್ರ ಸರ್ಕಾರದ ಅರೆ ಸೇನಾ ಪಡೆಯು ಇ.ಡಿಗೆ ಬೆಂಗಾವಲು ನೀಡಿತ್ತು.
ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ದೆಹಲಿ ಗಲಭೆಗೆ ಪಿಎಫ್ಐ ಹಣಕಾಸಿನ ನೆರವು ನೀಡಿದೆ ಎಂಬ ಆರೋಪದ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ. ಇದರ ಭಾಗವಾಗಿ ಈ ಶೋಧ ನಡೆಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.