ನವದೆಹಲಿ: ಸಕ್ಕರೆ ಕಾರ್ಖಾನೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಈ ಸಂಬಂಧ ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.
ಮಹಾರಾಷ್ಟ್ರದ ಮಾಜಿ ಗ್ರಾಮೀಣಾಭಿವೃದ್ಧಿ ಮತ್ತು ಕಾರ್ಮಿಕ ಸಚಿವ, ಎನ್ಸಿಪಿ ನಾಯಕ ಹಸನ್ ಮುಶ್ರಿಫ್ ಅವರಿಗೆ ಸಂಬಂಧಿಸಿದಂತೆ ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.