ADVERTISEMENT

ಹಿಂದೂಪುರ: ಆಸ್ಪತ್ರೆಯಲ್ಲಿ ಎಂಟು ರೋಗಿಗಳ ಸಾವು

ಆಮ್ಲಜನಕ ಪೂರೈಕೆಯಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯ: ಸಂಬಂಧಿಕರ ಆರೋಪ

​ಪ್ರಜಾವಾಣಿ ವಾರ್ತೆ
Published 3 ಮೇ 2021, 20:05 IST
Last Updated 3 ಮೇ 2021, 20:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೈದರಾಬಾದ್‌: ಹಿಂದೂಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದ ಎಂಟು ಮಂದಿ ಕೋವಿಡ್‌ ರೋಗಿಗಳು ಸೋಮವಾರ ಮೃತಪಟ್ಟಿದ್ದು, ಆಮ್ಲಜನಕದ ಸರಬರಾಜಿನಲ್ಲಿ ವ್ಯತ್ಯಯ ಆಗಿರುವುದೇ ಇವರ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

‘ತುರ್ತು ಸಂರ್ಭದಲ್ಲಿ ಬಳಸುವ ಸಲುವಾಗಿ ಆಸ್ಪತ್ರೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಮ್ಲಜನಕದ ಸಿಲಿಂಡರ್‌ಗಳನ್ನು ಬಳಸಿ ರೋಗಿಗಳಿಗೆ ಆಮ್ಲಜನಕ ನೀಡಲು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ’ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.

ಆದರೆ ಈ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಆಮ್ಲಜನಕ ಮೇಲ್ವಿಚಾರಣಾ ಅಧಿಕಾರಿಯಾಗಿರುವ ಅನಂತಪುರಂ ಜಿಲ್ಲಾ ಅರಣ್ಯ ರಕ್ಷಣಾಧಿಕಾರಿ ಜಗನ್ನಾಥ್‌ ಸಿಂಗ್‌ ಹೇಳಿದ್ದಾರೆ. ‘ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣವಲ್ಲ. ಈ ರೋಗಿಗಳ ಸ್ಥಿತಿ ತೀರಾ ಗಂಭೀರವಾಗಿತ್ತು. ಕೆಲವರ ಆಮ್ಲಜನಕದ ಪ್ರಮಾಣವು ಶೇ 50–60ರಷ್ಟಿತ್ತು’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.