ADVERTISEMENT

ಗುಜರಾತ್‌ ಸರ್ಕಾರದ ವಿರುದ್ಧ ಚುನಾವಣೆ ಆಯೋಗ ಗರಂ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 13:50 IST
Last Updated 22 ಅಕ್ಟೋಬರ್ 2022, 13:50 IST

ನವದೆಹಲಿ:ವಿಧಾನಸಭೆ ಚುನಾವಣೆಗೂ ಮುನ್ನ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತು ವರದಿ ಸಲ್ಲಿಸಲು ಗುಜರಾತ್ ಸರ್ಕಾರ ವಿಫಲವಾಗಿದೆ ಎಂದುಚುನಾವಣೆ ಆಯೋಗ ಹೇಳಿದೆ.

ಗುಜರಾತ್‌ ಸರ್ಕಾರದ ನಡೆಯ ಬಗ್ಗೆ ಚುನಾವಣೆ ಆಯೋಗ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಂದ ವಿವರಣೆ ಕೇಳಿ ನೋಟಿಸ್‌ ನೀಡಿದೆ.

ಈ ಬಗ್ಗೆ ಪತ್ರ ಬರೆದಿರುವ ಆಯೋಗ ಹುದ್ದೆಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತು ಶೀಘ್ರ ವರದಿ ಸಲ್ಲಿಸುವಂತೆ ಹೇಳಿದೆ. ನಿಗದಿತ ಗಡುವು ಮುಗಿದರೂ ಸರ್ಕಾರ ವರದಿ ಸಲ್ಲಿಸಿಲ್ಲ ಎಂದು ಹೇಳಿದೆ.

ADVERTISEMENT

ವರದಿ ನೀಡಲು ವಿಳಂಬವಾಗಿರುವುದು ಏಕೆ ಎಂದು ವಿವರಣೆ ನೀಡುವಂತೆ ಆಯೋಗ ನೋಟಿಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.