ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಸದಸ್ಯರಾದ ಆರ್ಥಿಕ ತಜ್ಞ ಹಾಗೂ ಅಂಕಣಕಾರಸುರ್ಜಿತ್ ಭಲ್ಲ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ಆರ್ಥಿಕ ಸಲಹಾ ಮಂಡಳಿಯಲ್ಲಿನ ಸದಸ್ಯ ಸ್ಥಾನಕ್ಕೆಡಿಸೆಂಬರ್ 1ರಂದೇ ರಾಜೀನಾಮೆ ನೀಡಿರುವುದಾಗಿ ಸುರ್ಜಿತ್ ಅವರು ತಮ್ಮ ಟ್ವೀಟ್ನಲ್ಲಿ ಹೇಳಿಕೊಂಡಿದ್ದಾರೆ. ಅವರ ರಾಜೀನಾಮೆಯನ್ನು ಪ್ರಧಾನಿ ಅಂಗೀಕರಿಸಿದ್ದಾರೆ.
’ಬೇರೆ ಸಂಸ್ಥೆಗೆ ಆರ್ಥಿಕ ಸಲಹೆಗಾರರಾಗಿ ಹೋಗುತ್ತಿರುವುದರಿಂದಮಂಡಳಿಯಲ್ಲಿನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀದ್ದೇನೆ‘ ಎಂದುಪತ್ರದಲ್ಲಿ ವಿವರಿಸಿದ್ದಾಗಿ ಪ್ರಧಾನಿ ಕಾರ್ಯಾಲಯದ ವಕ್ತಾರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಅದರಲ್ಲೂ ಪ್ರಧಾನಿಗೆ ಆರ್ಥಿಕತೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಲಹೆ ನೀಡಲು ಸ್ಥಾಪಿಸಿರುವ ಸ್ವತಂತ್ರ ಸಂಸ್ಥೆಯೇ ಪ್ರಧಾನಿ ಆರ್ಥಿಕ ಸಲಹಾ ಮಂಡಳಿ.
ಬಿಬೇಕ್ ದೇಬ್ರಾಯ್ ನೇತೃತ್ವದ ಆರ್ಥಿಕ ಸಲಹಾ ಮಂಡಳಿಯಲ್ಲಿ ಪ್ರಸ್ತುತ ಆರ್ಥಿಕ ತಜ್ಞರಾದ ರಥಿನ್ ರಾಯ್, ಅಶಿಮಾ ಗೋಯಲ್ ಹಾಗೂ ಶಮಿಕಾ ರವಿ ಸದಸ್ಯರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.