ADVERTISEMENT

ಎನ್‌ಕೌಂಟರ್: ಪುಲ್ವಾಮಾ ದಾಳಿ ಸಂಚುಕೋರ ಹತ್ಯೆ

Encounter

ಪಿಟಿಐ
Published 11 ಮಾರ್ಚ್ 2019, 19:37 IST
Last Updated 11 ಮಾರ್ಚ್ 2019, 19:37 IST

ಶ್ರೀನಗರ : ಟ್ರಾಲ್‌ನಲ್ಲಿ ನಡೆಸಲಾದ ಎನ್‌ಕೌಂಟರ್‌ನಲ್ಲಿ, ಪುಲ್ವಾಮಾ ಭಯೋತ್ಪಾದಕ ದಾಳಿಯ ಸಂಚುಕೋರ ಮುದಸ್ಸಿರ್ ಅಹ್ಮದ್ ಖಾನ್ ಅಲಿಯಾಸ್ ಮೊಹಮ್ಮದ್ ಭಾಯಿ ಹಾಗೂ ಇನ್ನೊಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ.

‘ಭಾನುವಾರ ಮಧ್ಯರಾತ್ರಿ ತನಕ ಉಗ್ರರು ಹಾಗೂ ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ದಾಳಿ ನಡೆಯಿತು. ಮೃತ ಉಗ್ರರನ್ನು ಜೈಷ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಖಾನ್ ಹಾಗೂ ಸಜ್ಜದ್ ಭಟ್‌ ಎಂದು ಗುರುತಿಸಲಾಗಿದೆ’ ಎಂದು ಅಧಿಕಾರಿಗಳು
ತಿಳಿಸಿದ್ದಾರೆ.

ಉಗ್ರರು ಅಡಗಿರುವ ಕುರಿತು ಗುಪ್ತಚರ ಇಲಾಖೆಯ ನಿರ್ದಿಷ್ಟ ಮಾಹಿತಿ ಆಧರಿಸಿ ಭದ್ರತಾ ಪಡೆ ಸಿಬ್ಬಂದಿ,ಟ್ರಾಲ್‌ನ ಪಿಂಗ್ಲಿಶ್ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಉಗ್ರರು ಈ ವೇಳೆ ಗುಂಡಿನ ದಾಳಿ ಆರಂಭಿಸಿದ್ದರಿಂದ, ಭದ್ರತಾ ಪಡೆ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ಖಾನ್ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಗಿದೆ. ಆದರೆ ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿರುವುದರಿಂದಭಟ್ ಮೃತದೇಹ ಸ್ವೀಕರಿಸಲು ಕುಟುಂಬದವರು ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು
ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.