ಶ್ರೀನಗರ: ಇಲ್ಲಿನ ಛನಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಶನಿವಾರ ಗುಂಡಿನ ಚಕಮಕಿನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಮೇಥಾನ್ ಪ್ರದೇಶದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾಗ ಈ ದಾಳಿ ನಡೆದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ನಾಟಿಪೋರಾ ಪ್ರದೇಶದ ಬಳಿ ನಡೆದ ಎನ್ಕೌಂಟರ್ ವೇಳೆ ಒಬ್ಬ ಉಗ್ರ ತಪ್ಪಿಸಿಕೊಂಡಿದ್ದ. ಆ ಬಳಿಕ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಶುಕ್ರವಾರ ನಡೆದ ಗುಂಡಿನ ದಾಳಿ ವೇಳೆ ಒಬ್ಬ ಉಗ್ರ ಹತನಾಗಿದ್ದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.