ADVERTISEMENT

ಪಂಜಾಬ್: ಸಿಧು ಮೂಸೆವಾಲಾ ಹತ್ಯೆ ಗ್ಯಾಂಗ್‌ಸ್ಟರ್ ವಿರುದ್ಧ ಎನ್‌ಕೌಂಟರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2022, 9:11 IST
Last Updated 20 ಜುಲೈ 2022, 9:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಮೃತಸರ: ಪಂಜಾಬ್‌ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿ ಗ್ಯಾಂಗ್‌ಸ್ಟರ್ ವಿರುದ್ಧ ಪೊಲೀಸ್ ಎನ್‌ಕೌಂಟರ್ ನಡೆಯುತ್ತಿರುವುದು ವರದಿಯಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಎನ್‌ಕೌಂಟರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಮನೆಯಲ್ಲೇ ಉಳಿದುಕೊಳ್ಳುವಂತೆ ಸೂಚಿಸಲಾಗಿದೆ.

ಪೊಲೀಸ್ ಹಾಗೂ ಗ್ಯಾಂಗಸ್ಟರ್‌ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ. ಪಂಜಾಬ್‌ನ ಆ್ಯಂಟಿ ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಇಬ್ಬರು ಆರೋಪಿಗಳ ಹುಡುಕಾಟದ ನಡುವೆ ಎನ್‌ಕೌಂಟರ್ ನಡೆದಿದೆ.

ಮೇ 19ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.