ADVERTISEMENT

ಶ್ರೀನಗರ: ಲಷ್ಕರ್–ಎ–ತೋಯ್ಬಾದ ಮೂವರು ಭಯೋತ್ಪಾದಕರ ಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2022, 11:21 IST
Last Updated 20 ಡಿಸೆಂಬರ್ 2022, 11:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಯಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದವರಲ್ಲಿ ಒಬ್ಬ ಕಾಶ್ಮೀರಿ ಪಂಡಿತ್ ಪುರಾಣ ಕ್ರಿಶನ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಹೇಳಲಾದ ಲತೀಫ್ ಲೋನ್ ಹಾಗೂ ಇನ್ನೊಬ್ಬ ಭಯೋತ್ಪಾದಕನನ್ನು ನೇಪಾಳದ ಟಿಲ್ ಬಹಾದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದ ಉಮರ್ ನಜೀರ್ ಎಂದು ಗುರುತಿಸಲಾಗಿದೆ ಎಂದುಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ.

ಶೋಪಿಯಾನ್‌ನ ಜೈನಾಪೋರಾ ಪ್ರದೇಶದ ಮುಂಜ್ ಮಾರ್ಗ್‌ನಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದಾಗ, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಪಡೆಯವರು ಪ್ರತಿ ಗುಂಡಿನದಾಳಿ ನಡೆಸಿ ಎನ್‌ಕೌಂಟರ್ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಎಕೆ 47 ಹಾಗೂ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.