ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬುಧವಾರ ಎನ್ಕೌಂಟರ್ ನಡೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಎನ್ಕೌಂಟರ್ ಬೆನ್ನಲ್ಲೇ, ಅಡಗುದಾಣಗಳಲ್ಲಿನ ಉಗ್ರರು ಪಾರಾಗದಂತೆ ತಡೆಯಲು ಹೆಲಿಕಾಪ್ಟರ್ಗಳ ಮೂಲಕ ವೈಮಾನಿಕ ಕಣ್ಗಾವಲು ನಡೆಸಲಾಗುತ್ತಿದೆ. ಘಟನೆಯಲ್ಲಿ ಸಂಭವಿಸಿರಬಹುದಾದ ಸಾವು– ನೋವಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದ್ದಾರೆ.
‘ಉಗ್ರರ ಪತ್ತೆಗೆ ಬೃಹತ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಮಾಹಿತಿ ಲಭಿಸಬೇಕಿದೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.