ADVERTISEMENT

ಕೇಂದ್ರ ಸರ್ಕಾರದ ಇಲಾಖೆಗಳ ಸಭೆಯಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಅರಿವು

ಪಿಟಿಐ
Published 15 ಅಕ್ಟೋಬರ್ 2020, 9:10 IST
Last Updated 15 ಅಕ್ಟೋಬರ್ 2020, 9:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಪ್ರತಿ ಸಭೆ ಆರಂಭದಲ್ಲಿ ಕೋವಿಡ್‌ ಸೋಂಕಿನ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಿಬ್ಬಂದಿಯಲ್ಲಿ ಅರಿವು ಮೂಡಿಸಬೇಕು ಎಂದು ಸಿಬ್ಬಂದಿ ಸುಧಾರಣಾ ಸಚಿವಾಲಯ ಆದೇಶಿಸಿದೆ.

ಕೋವಿಡ್‌ ಪ್ರಸರಣವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ಸಚಿವಾಲಯವು ತಿಳಿಸಿದೆ.

ಕೇಂದ್ರ ಎಲ್ಲಾ ಇಲಾಖೆಗಳು ಪ್ರತಿ ಸಭೆಯ ಪ್ರಾರಂಭದಲ್ಲಿ ಮುಖಗವಸು ಧರಿಸವುದು, ವೈಯಕ್ತಿಕ ಅಂತರ, ಶುಚಿತ್ವ ಕುರಿತ ಮಾಹಿತಿಯನ್ನು ನೀಡಬೇಕು ಎಂದು ಅದು ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.