
ಪ್ರಾತಿನಿಧಿಕ ಚಿತ್ರ
ನವದೆಹಲಿ: ಅಭಿವೃದ್ಧಿ ಹೊಂದಿದ ದೇಶಗಳು ಇಂಗಾಲ ಹೊರಸೂಸುವಿಕೆಯ ಪ್ರಮಾಣ ತಗ್ಗಿಸುವ ವಾಗ್ದಾನವನ್ನು ಈಡೇರಿಸಲು ಬದ್ಧವಾಗಬೇಕು ಎಂದು ಭಾರತ ಒತ್ತಿ ಹೇಳಿದೆ.
ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ಯಾರಿಸ್ ಒಪ್ಪಂದ ಜಾರಿಯಾಗಿ ಹತ್ತು ವರ್ಷಗಳು ಕಳೆದರೂ, ಆ ಒಪ್ಪಂದದ ಗುರಿಗಳನ್ನು ತಲುಪಲು ಸಾಧ್ಯವಾಗಿಲ್ಲ ಎಂದು ಬ್ರೆಜಿಲ್ನಲ್ಲಿನ ಭಾರತದ ರಾಯಭಾರಿ ದಿನೇಶ್ ಭಾಟಿಯಾ ಹೇಳಿದ್ದಾರೆ.
ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯು (ಸಿಒಪಿ–30) ಬ್ರೆಜಿಲ್ನ ಬೆಲೆಮ್ ನಗರದಲ್ಲಿ ಸೋಮವಾರ ಆರಂಭವಾಗಲಿದ್ದು, ಅದಕ್ಕೆ ಪೂರಕವಾಗಿ ಭಾರತವು ಈ ಒತ್ತಾಯ ಮಾಡಿದೆ.
ಎರಡು ವಾರಗಳ ಸುದೀರ್ಘ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿಲ್ಲ. ಆದರೆ, ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಕೊನೆಯಲ್ಲಿ ನಡೆಯಲಿರುವ ಉನ್ನತ ಮಟ್ಟದ ಮಾತುಕತೆ ವೇಳೆ ಶೃಂಗವನ್ನು ಸೇರಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.