ADVERTISEMENT

ವಾಜಪೇಯಿ ಅಧಿಕಾರಾವಧಿಯಲ್ಲಿ ಉತ್ತಮ ಆಡಳಿತದ ಯುಗ ಆರಂಭ : ಅಮಿತ್‌ ಶಾ

ಪಿಟಿಐ
Published 25 ಡಿಸೆಂಬರ್ 2020, 7:01 IST
Last Updated 25 ಡಿಸೆಂಬರ್ 2020, 7:01 IST
ವಾಜಪೇಯಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಅಮಿತ್‌ ಶಾ
ವಾಜಪೇಯಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಅಮಿತ್‌ ಶಾ   

ನವದೆಹಲಿ: ಉತ್ತಮ ಆಡಳಿತದ ಯುಗ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಗಳು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅಧಿಕಾರಾವಧಿಯಲ್ಲಿ ಆರಂಭವಾದವು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯ ಅಂಗವಾಗಿ ಅಮಿತ್‌ ಶಾ ಅವರು ಶುಕ್ರವಾರ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,‘ ರಾಷ್ಟ್ರ ಸೇವೆ ಮತ್ತು ಕರ್ತವ್ಯದ ಮೇಲಿನ ಅವರ ಭಕ್ತಿ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ’ ಎಂದಿದ್ದಾರೆ.

ADVERTISEMENT

‘ವಾಜಪೇಯಿ ಅವರ ತತ್ವಗಳು ಮತ್ತು ದೇಶದ ಪ್ರಗತಿಗಾಗಿ ಅವರ ಸಮರ್ಪಣಾ ಭಾವವು ನಮಗೆ ರಾಷ್ಟ್ರ ಸೇವೆ ಮಾಡಲು ಶಕ್ತಿ ನೀಡುತ್ತದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.