ಲಖನೌ: ಉತ್ತರ ಪ್ರದೇಶದ ಎಲ್ಲ ಇಲಾಖೆಗಳು ಮತ್ತು ನಿಗಮಗಳಲ್ಲಿ ಆರು ತಿಂಗಳ ಕಾಲ ಮುಷ್ಕರವನ್ನು ನಿಷೇಧಿಸಿದ್ದು, ಈ ಸಂಬಂಧ ಸೋಮವಾರದಿಂದಲೇ ಎಸ್ಮಾ ಜಾರಿ ಮಾಡಲಾಗಿದೆ.
ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರುಫೆ 6ರಂದು ಮುಷ್ಕರ ನಡೆಸಲು ಉದ್ದೇಶಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರ ಎಸ್ಮಾ ಜಾರಿಗೊಳಿಸಿದೆ.
ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಉಲ್ಲಂಘಿಸಿ ಮುಷ್ಕರ ನಡೆಸುವ ನೌಕರರನ್ನು ಯಾವುದೇ ವಾರಂಟ್ ಇಲ್ಲದೇ ಬಂಧಿಸಬಹುದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.