ಪುಣೆ: ಗೂಢಚರ್ಯೆ ಪ್ರಕರಣದ ಆರೋಪಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರನ್ನು ಸುಳ್ಳುಪತ್ತೆ ಪರೀಕ್ಷೆ, ಧ್ವನಿ ಪರೀಕ್ಷೆ ಮತ್ತು ಮನೋ ವಿಶ್ಲೇಷಣೆಗೆ ಒಳಪಡಿಸಬೇಕು ಎಂದು ಕೋರಿದ್ದ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ವಿಶೇಷ ನ್ಯಾಯಾಧೀಶ ವಿ.ಆರ್.ಕಚರೆ ಅವರು ಶನಿವಾರ ಎಟಿಎಸ್ ಅರ್ಜಿಯನ್ನು ತಿರಸ್ಕರಿಸಿದರು.
ಕುರುಲ್ಕರ್ ಅವರು ಪುಣೆಯಲ್ಲಿಯ ಡಿಆರ್ಡಿಒ ಪ್ರಯೋಗಾಲಯವೊಂದರ ನಿರ್ದೇಶಕರಾಗಿದ್ದರು. ಪಾಕಿಸ್ತಾನದ ಗುಪ್ತಚರ ಇಲಾಖೆ ಜೊತೆ ಸಂಪರ್ಕ ಹೊಂದಿದ್ದ ಮಹಿಳೆಯೊಂದಿಗೆ ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದ ಆರೋಪದ ಮೇಲೆ ಅವರನ್ನು ಮೇ 3ರಂದು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.