ನವದೆಹಲಿ: ದೆಹಲಿಯ ವಾಯು ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದ್ದು, ಇದನ್ನು ಸಂಸತ್ ಕೂಡ ಅಂಗೀಕರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇದೇ ವೇಳೆ ವಾಯು ಗುಣಮಟ್ಟದಲ್ಲಿ ಸುಧಾರಣೆಗಾಗಿ ದೆಹಲಿ ಜನತೆಯ ನಿರಂತರ ಪ್ರಯತ್ನವನ್ನು ಅವರು ಪ್ರಶಂಸಿಸಿದ್ದಾರೆ.
ಈ ಕುರಿತು ಟ್ವಿಟರ್ ಮಾಡಿರುವ ಕೇಜ್ರಿವಾಲ್, ಚಿತ್ರವನ್ನು ಹಂಚಿದ್ದಾರೆ.
ಜನವರಿ 31ರಂದು 2022-23ರ ಆರ್ಥಿಕ ಸರ್ವೇ ವರದಿಯನ್ನು ಸಂಸತ್ ಮುಂದಿಡಲಾಗಿದೆ.
ಧೃಡ ಸಂಕಲ್ಪವನ್ನು ಹೊಂದಿದ್ದರೆ ಎಂತಹ ಕಷ್ಟಕರವಾದ ಕೆಲಸವೂ ಸಾಧ್ಯವಾಗಲಿದೆ. ಭವಿಷ್ಯದಲ್ಲಿ ವಾಯು ಗುಣಮಟ್ಟ ಸುಧಾರಿಸುವತ್ತ ಪ್ರಯತ್ನಿಸಬೇಕಿದೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.