ADVERTISEMENT

ಹೆಲಿಕಾಪ್ಟರ್‌ ಖರೀದಿ ಹಗರಣ: ತ್ಯಾಗಿಗೆ ಜಾಮೀನು

ಪಿಟಿಐ
Published 13 ಸೆಪ್ಟೆಂಬರ್ 2018, 3:59 IST
Last Updated 13 ಸೆಪ್ಟೆಂಬರ್ 2018, 3:59 IST
   

ನವದೆಹಲಿ: ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯುಪಡೆ ಮಾಜಿ ಮುಖ್ಯಸ್ಥ ಎಸ್‌.ಪಿ. ತ್ಯಾಗಿ ಮತ್ತು ಇತರರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

ನ್ಯಾಯಾಲಯದ ಮುಂದೆ ಬುಧವಾರ ಹಾಜರಾದ ತ್ಯಾಗಿ ಮತ್ತು ಅವರ ಸೋದರ ಸಂಬಂಧಿಗಳಿಗೆ ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಜಾಮೀನು ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿ ಖುದ್ದಾಗಿ ಹಾಜರಾಗುವಂತೆ ನ್ಯಾಯಾಲಯ ಜುಲೈ 24ರಂದು ತ್ಯಾಗಿ, ಆಗಸ್ಟಾ ವೆಸ್ಟ್‌ಲ್ಯಾಂಡ್‌ ಮತ್ತು ಫಿನ್ಮೆಕ್ಕಾನಿಕಾ ನಿರ್ದೇಶಕರು ಹಾಗೂ ಇತರರಿಗೆ ಸಮನ್ಸ್‌ ನೀಡಿತ್ತು. ಆದರೆ, ವಿದೇಶದಲ್ಲಿನ ಕಂಪನಿಗಳ ನಿರ್ದೇಶಕರು ಬುಧವಾರ ಹಾಜರಾಗಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.