ADVERTISEMENT

ಪುದುಚೇರಿ: ಬಿಜೆಪಿ ಸೇರಿದ ನಮಶಿವಾಯಂ

ಪಿಟಿಐ
Published 28 ಜನವರಿ 2021, 17:07 IST
Last Updated 28 ಜನವರಿ 2021, 17:07 IST
ಎ.ನಮಶಿವಾಯಂ –ಟ್ವಿಟರ್‌ ಚಿತ್ರ
ಎ.ನಮಶಿವಾಯಂ –ಟ್ವಿಟರ್‌ ಚಿತ್ರ   

ನವದೆಹಲಿ: ಕೆಲ ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಎ.ನಮಶಿವಾಯಂ ಹಾಗೂ ಈ.ತಿಪ್ಪೈನಾಥನ್‌ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಈ ಮೊದಲು ಕಾಂಗ್ರೆಸ್‌ನಲ್ಲಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಸಮ್ಮುಖದಲ್ಲಿ ಇವರು ಕೇಸರಿ ಪಡೆಗೆ ಸೇರಿದರು. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ನಮಶಿವಾಯಂ ಅವರನ್ನು ಇತ್ತೀಚೆಗೆ ಪಕ್ಷದ ಎಲ್ಲ ಹುದ್ದೆಗಳಿಂದ ಕಾಂಗ್ರೆಸ್‌ ಪದಚ್ಯುತಿಗೊಳಿಸಿತ್ತು.

ADVERTISEMENT

‘ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಸೇರ್ಪಡೆಯಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ’ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.