ADVERTISEMENT

ದೆಹಲಿ ಅಬಕಾರಿ ನೀತಿ ಪ್ರಕರಣ: ಸಾಕ್ಷಿಯಾಗಿ ದಿನೇಶ್ ಅರೋರಾ– ಕೋರ್ಟ್ ಒಪ್ಪಿಗೆ

ಪಿಟಿಐ
Published 16 ನವೆಂಬರ್ 2022, 14:20 IST
Last Updated 16 ನವೆಂಬರ್ 2022, 14:20 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ಉದ್ಯಮಿ ದಿನೇಶ್ ಅರೋರಾ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ ಎಂದು ಕೋರ್ಟಿನ ಮೂಲಗಳು ತಿಳಿಸಿವೆ.

ವಿಶೇಷ ನ್ಯಾಯಮೂರ್ತಿ ಎಂ.ಕೆ. ನಾಗಪಾಲ್ ಅವರು ಅರೋರಾ ಅವರಿಗೆ ಕ್ಷಮಾದಾನದ ಆದೇಶವನ್ನೂ ನೀಡಿದ್ದಾರೆ.

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅರೋರಾ ಅವರು, ತಾವು ಸ್ವಯಂಪ್ರೇರಣೆಯಿಂದ ನಿಜ ಹೇಳಲು ಸಿದ್ಧವಿರುವುದಾಗಿ ಹಾಗೂ ಪ್ರಕರಣದಲ್ಲಿ ಸಾಕ್ಷಿಯಾಗಲು ಸಿದ್ಧವಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ADVERTISEMENT

ಈಹಿಂದೆ ನ್ಯಾಯಾಲಯವು ಅರೋರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಇದಕ್ಕೆ ಸಂಬಂಧಿಸಿದಂತೆ ಸಿಬಿಐ, ‘ಅರೋರಾ ಅವರು ತನಿಖೆಯಲ್ಲಿ ಪ್ರಮುಖ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಿದರೆ ತಮಗೆ ಯಾವುದೇ ಅಭ್ಯಂತರವಿಲ್ಲ’ ಎಂದು ನ್ಯಾಯಾಲಯದ ಮುಂದೆ ಹೇಳಿತ್ತು.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅರೋರಾ ಆಪ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.