ADVERTISEMENT

ಅಪನಂಬಿಕೆ ನಿವಾರಣೆಗೆ ನಾನೇ ಮೊದಲು ಲಸಿಕೆ ಪಡೆವೆ: ಹರ್ಷವರ್ಧನ್

ಪಿಟಿಐ
Published 13 ಸೆಪ್ಟೆಂಬರ್ 2020, 19:31 IST
Last Updated 13 ಸೆಪ್ಟೆಂಬರ್ 2020, 19:31 IST
ಹರ್ಷವರ್ಧನ್‌
ಹರ್ಷವರ್ಧನ್‌   

ನವದೆಹಲಿ: ‘ಮುಂದಿನ ವರ್ಷದ ಆರಂಭದಲ್ಲಿ ಕೋವಿಡ್‌–19ಗೆ ಲಸಿಕೆ ಲಭ್ಯವಾಗಬಹುದು. ಆದರೆ, ಲಸಿಕೆ ಕುರಿತಂತೆ ಜನರಲ್ಲಿ ಮೂಡುವ ಅಪನಂಬಿಕೆಯನ್ನು ಹೋಗಲಾಡಿಸಲು ನಾನೇ ಮೊದಲು ಲಸಿಕೆ ಹಾಕಿಸಿಕೊಳ್ಳುವೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಭಾನುವಾರ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿನ ತಮ್ಮ ಹಿಂಬಾಲಕರೊಂದಿಗೆಆನ್‌ಲೈನ್‌ ಮೂಲಕ ನಡೆಸಿದ ‘ಸಂಡೇ ಸಂವಾದ‘ದಲ್ಲಿ ಅವರು ಮಾತನಾಡಿದರು.

‘ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿರುವ ಕೋವಿಡ್‌–19 ರೋಗಿಗಳಿಗೆ ಈ ಲಸಿಕೆ ಬಳಸಲು ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ‘ ಎಂದೂ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.