ADVERTISEMENT

ಎನ್‌ಸಿಬಿ ವಿರುದ್ಧ ಸುಲಿಗೆ ಆರೋಪ: ಸೈಲ್‌ರಿಂದ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಪಿಟಿಐ
Published 27 ಅಕ್ಟೋಬರ್ 2021, 6:56 IST
Last Updated 27 ಅಕ್ಟೋಬರ್ 2021, 6:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಸೇವನೆ ಪ್ರಕರಣದಿಂದ ಆರ್ಯನ್‌ ಖಾನ್ ಕೈಬಿಡಲು ಎನ್‌ಸಿಬಿ ಅಧಿಕಾರಿಗಳು ₹25 ಕೋಟಿಗೆ ಬೇಡಿಕೆ ಇರಿಸಿದ್ದಾಗಿ ಆರೋಪಿಸಿದ್ದ ಸ್ವತಂತ್ರ ಸಾಕ್ಷಿದಾರ ಪ್ರಭಾಕರ ಸೈಲ್ ಅವರಿಂದ ಮುಂಬೈ ಪೊಲೀಸರು ಎಂಟು ಗಂಟೆಗಳ ಕಾಲ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಸಂಜೆಪ್ರಭಾಕರ್ ಅವರು ನಗರ ಪೊಲೀಸರ ಮುಂದೆ ಹಾಜರಾಗಿದ್ದರು. ಅವರಿಂದ ರಾತ್ರಿಯಿಂದಲೇ ಪೊಲೀಸರು ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದು, ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ಪೂರ್ಣಗೊಂಡಿತು ಎಂದು ಅವರು ಹೇಳಿದರು.‘

ಹೇಳಿಕೆ ನೀಡಿದ ನಂತರ ಸೈಲ್ ಅವರು, ಬುಧವಾರ ಮುಂಜಾನೆ ಅಜಾದ್ ಮೈದಾನದಲ್ಲಿರುವ ಸಹಾಯ ಪೊಲೀಸ್ ಅಯುಕ್ತರ ಕಚೇರಿಗೆ ತೆರಳಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿಟಿ ಪೊಲೀಸರು ಅವರಿಗೆ ಬಿಗಿ ಭದ್ರತೆ ಒದಗಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.