ಮುಂಬೈ:ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ರಾಜ್ಯ ವಿಧಾನ ಪರಿಷತ್ ನಾಯಕರನ್ನಾಗಿ ನೇಮಿಸಿ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಬುಧವಾರ ಘೋಷಿಸಿದ್ದಾರೆ.
ವಿಧಾನಮಂಡಲದ ಮುಂಗಾರು ಅಧಿವೇಶನದ ಮೊದಲ ದಿನ ಸಂಪುಟದ ನೂತನ ಸಚಿವರನ್ನು ಮೇಲ್ಮನೆಯಲ್ಲಿ ಪರಿಚಯಿಸಿ ಬಳಿಕ ಅವರು ಈ ಘೋಷಣೆ ಮಾಡಿದರು.ಸಾಮಾನ್ಯವಾಗಿ ಮುಖ್ಯಮಂತ್ರಿ ರಾಜ್ಯ ವಿಧಾನಸಭೆಯ ನಾಯಕರಾಗಿರುತ್ತಾರೆ, ಉಪ ಮುಖ್ಯಮಂತ್ರಿ ವಿಧಾನ ಪರಿಷತ್ತಿನ ನಾಯಕರಾಗಿರುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.