ADVERTISEMENT

ರೈತ ನಾಯಕ ರಾಕೇಶ್‌ ಟಿಕಾಯತ್‌ಗೆ ಕೊಲೆ ಬೆದರಿಕೆ: ಪೊಲೀಸರಿಂದ ತನಿಖೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮಾರ್ಚ್ 2022, 7:12 IST
Last Updated 28 ಮಾರ್ಚ್ 2022, 7:12 IST
ರಾಕೇಶ್‌ ಟಿಕಾಯತ್
ರಾಕೇಶ್‌ ಟಿಕಾಯತ್   

ಮುಜಾಫರ್‌ನಗರ (ಉತ್ತರ ಪ್ರದೇಶ): ಭಾರತೀಯ ಕಿಸಾನ್ ಯೂನಿಯನ್‌ ಮುಖ್ಯಸ್ಥ ರಾಕೇಶ್ ಟಿಕಾಯತ್‌ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಟಿಕಾಯತ್‌ ಅವರ ಕಾರು ಚಾಲಕ ಪ್ರಜ್ವಲ್‌ ತ್ಯಾಗಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ಅಧೀಕ್ಷಕ ಅಭಿಷೇಕ್ ಯಾದವ್ ಹೇಳಿದ್ದಾರೆ.

ಹಿರಿಯ ಸಬ್ ಇನ್ಸ್‌ಪೆಕ್ಟರ್ ರಾಕೇಶ್ ಶರ್ಮಾ ನೇತೃತ್ವದ ಪೊಲೀಸ್ ತಂಡವು ಟಿಕಾಯತ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಂದ ಮಾಹಿತಿ ಕಲೆ ಹಾಕಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.