ADVERTISEMENT

ಕೃಷಿ ಕಾಯ್ದೆ ಪ್ರತಿ ಸುಟ್ಟು'ಹೋಳಿ' ಆಚರಣೆ

ಪಿಟಿಐ
Published 28 ಮಾರ್ಚ್ 2021, 15:40 IST
Last Updated 28 ಮಾರ್ಚ್ 2021, 15:40 IST
ದೆಹಲಿಯ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರು ನೂತನ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಭಾನುವಾರ ಹೋಳಿ ಆಚರಿಸಿದರು –ರಾಯಿಟರ್ಸ್‌ ಚಿತ್ರ
ದೆಹಲಿಯ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರು ನೂತನ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಭಾನುವಾರ ಹೋಳಿ ಆಚರಿಸಿದರು –ರಾಯಿಟರ್ಸ್‌ ಚಿತ್ರ   

ನವದೆಹಲಿ: ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನೂತನ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಹಾಕುವ ಮೂಲಕ ಭಾನುವಾರ ‘ಹೋಳಿಕಾ ದಹನ’ ಆಚರಿಸಿದರು ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಏ. 5ರಂದು ‘ಎಫ್‌ಸಿಐ ಬಚಾವೊ ದಿವಸ್‌’ ಹಮ್ಮಿಕೊಳ್ಳಲಾಗುವುದು. ದೇಶದಾದ್ಯಂತ ಇರುವ ಎಫ್‌ಸಿಐ ಕಚೇರಿಗಳಿಗೆ ಅಂದು ಬೆಳಿಗ್ಗೆ 11ರಿಂದ ಸಂಜೆ 5 ರವರೆಗೆ ಮುತ್ತಿಗೆ ಹಾಕಲಾಗುವುದು ಎಂದೂ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

‘ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಬೆಂಬಲ ಬೆಲೆಗೆ ಕಾನೂನಾತ್ಮಕ ರಕ್ಷಣೆ ನೀಡಬೇಕು ಎಂಬ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ರೈತರು ಹೋಳಿ ಆಚರಣೆ ವೇಳೆ ಪುನರುಚ್ಚರಿಸಿದರು’ ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.