ADVERTISEMENT

ಮಹಾಪಂಚಾಯಿತಿಗೆ ರೈತರ ಸಿದ್ಧತೆ: ನರೇಶ್‌ ಟಿಕಾಯತ್‌

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 22:13 IST
Last Updated 1 ಸೆಪ್ಟೆಂಬರ್ 2021, 22:13 IST
ರೈತರ ಪ್ರತಿಭಟನೆ (ಸಾಂದರ್ಭಿಕ ಚಿತ್ರ)
ರೈತರ ಪ್ರತಿಭಟನೆ (ಸಾಂದರ್ಭಿಕ ಚಿತ್ರ)   

ಲಖನೌ: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ‍ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು), ಉತ್ತರ ಪ್ರದೇಶದ ಮುಜಫ್ಫರ್‌ನಗರದಲ್ಲಿ ಭಾನುವಾರ ಭಾರಿ ಸಮಾವೇಶ ನಡೆಸಲು ಉದ್ದೇಶಿಸಿದೆ.

ಈ ಮಹಾಪಂಚಾಯಿತಿಯಲ್ಲಿ ಲಕ್ಷಾಂತರ ರೈತರು ಭಾಗವಹಿಸಲಿದ್ದಾರೆ ಎಂದು ಬಿಕೆಯು ಅಧ್ಯಕ್ಷ ನರೇಶ್‌ ಟಿಕಾಯತ್‌ ಹೇಳಿದ್ದಾರೆ. ಮುಜಫ್ಫರ್‌ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ.

ವಿವಿಧ ಜಾತಿ ಪಂಚಾಯಿತಿಗಳ ನಾಯಕರು ಉತ್ತರ ಪ್ರದೇಶದ ಗ್ರಾಮಗಳಿಗೆ ಭೇಟಿ ಕೊಟ್ಟು ಮಹಾಪಂಚಾಯಿತಿಗೆ ಜನರನ್ನು ಸೇರಿಸಲು ಯತ್ನಿಸುತ್ತಿದ್ದಾರೆ.

ADVERTISEMENT

ಮುಜಫ್ಫರ್‌ನಗರದ ಮಹಾಪಂಚಾ ಯಿತಿಯು ದೇಶದ ಅತ್ಯಂತ ದೊಡ್ಡ ರೈತ ಸಮಾವೇಶ ಎನಿಸಿಕೊಳ್ಳಲಿದೆ ಎಂದು ಟಿಕಾಯತ್‌ ಅವರು ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರಿಗೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ. ಉತ್ತರ ಪ್ರದೇಶದಾದ್ಯಂತ ‘ಕಿಸಾನ್‌ ಸಂಪರ್ಕ ಯಾತ್ರೆ’ ನಡೆಸಲು ಬಿಜೆಪಿ ಉದ್ದೇಶಿಸಿದೆ. ರೈತರ ಚಳವಳಿಯು ಪ್ರಬಲವಾಗಿರುವ ರಾಜ್ಯದ ಪಶ್ಚಿಮ ಭಾಗಕ್ಕೆ ಹೆಚ್ಚು ಗಮನ ನೀಡಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.