ರಾಂಚಿ: ಐಆರ್ಸಿಟಿಸಿ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬಲಗಾಲಿನಲ್ಲಿ ಗುಳ್ಳೆಗಳು ಕಾಣಿಸಿಕೊಂಡು ನಡೆಯಲಾಗದ ಪರಿಸ್ಥಿತಿ ತಲುಪಿದ್ದಾರೆ.
ಯಾದವ್ ಅವರು ರಾಜೇಂದ್ರ ಇನ್ಸ್ಟಿಟ್ಯೂಟ್ಆಫ್ ಮೆಡಿಕಲ್ ಸೈನ್ಸ್ (ಆರ್ಐಎಮ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವೈದ್ಯರುತಿಳಿಸಿದ್ದಾರೆ.
ಈ ಗುಳ್ಳೆಗಳ ಕಾರಣ ಕಳೆದೆರಡು ದಿನಗಳಿಂದ ಲಾಲೂ ಅವರ ದೇಹದಲ್ಲಿನ ಸಕ್ಕರೆಯ ಪ್ರಮಾಣ ಹಾಗೂ ರಕ್ತದೊತ್ತಡ ಹೆಚ್ಚಾಗಿತ್ತು. ಗುಳ್ಳೆಗಳು ಗುಣವಾಗಲು ಇನ್ನೂಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಆರ್ಐಎಮ್ಎಸ್ನ ವೈದ್ಯ ಉಮೇಶ್ ಪ್ರಸಾದ್ ತಿಳಿಸಿದ್ದಾರೆ.
ಲಾಲೂ ಅವರು ನಿಂತುಕೊಳ್ಳಲಾಗದ ಹಾಗೂ ಕುಳಿತುಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರು
ನವದೆಹಲಿ:ಐಆರ್ಸಿಟಿಸಿ ಭ್ರಷ್ಟಾಚಾರ ಪ್ರಕರಣ ಸಂಬಂಧದ ವಿಚಾರಣೆ ಡಿ.20ರಂದು ನಡೆಯಲಿದ್ದು, ಲಾಲೂ ಪ್ರಸಾದ್ ಯಾದವ್ ಅವರುವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕೆಂದು ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಲಾಲೂ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪರ ವಕೀಲ ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಮೂರ್ತಿ ಅರುಣ್ ಭಾರದ್ವಾಜ್ ಈ ನಿರ್ದೇಶನ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.