ADVERTISEMENT

ದೆಹಲಿ ಹಿಂಸಾಚಾರ: ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧವೂ ಎಫ್‌ಐಆರ್

ಪಿಟಿಐ
Published 27 ಜನವರಿ 2021, 13:45 IST
Last Updated 27 ಜನವರಿ 2021, 13:45 IST
ರಾಕೇಶ್ ಟಿಕಾಯತ್ (ಪಿಟಿಐ ಚಿತ್ರ)
ರಾಕೇಶ್ ಟಿಕಾಯತ್ (ಪಿಟಿಐ ಚಿತ್ರ)   

ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ 22 ಎಫ್‌ಐಆರ್ ದಾಖಲಿಸಲಾಗಿದ್ದು 200 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಟಿಕಾಯತ್, ರೈತನೊಬ್ಬನ ಮೇಲೆ ಎಫ್‌ಐಆರ್ ದಾಖಲಿಸುವುದೆಂದರೆ ದೇಶದ ರೈತರ ಮೇಲೆ ಎಫ್‌ಐಆರ್ ದಾಖಲಿಸಿದಂತೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಟ್ರ್ಯಾಕ್ಟರ್ ಪೆರೇಡ್ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ರಾಜಕೀಯ ಆರೋಪ ಪ್ರತ್ಯಾರೋಪಗಳೂ ಹೆಚ್ಚಾಗಿವೆ. ಗಲಭೆಗೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಸಂಸದ ಸುರೇಂದ್ರ ಸಿಂಗ್ ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಸಹ ತಿರುಗೇಟು ನೀಡಿದೆ. ಸದ್ಯದ ಪರಿಸ್ಥಿತಿಗೆ ಬಿಜೆಪಿಯೇ ನೇರ ಹೊಣೆ ಎಂದು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಟೀಕಿಸಿದ್ದಾರೆ. ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಹಿಂಸಾಚಾರ ನಡೆದದ್ದು ದುರದೃಷ್ಟಕರ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.