ADVERTISEMENT

ತುರ್ತುನಿರ್ಗಮನ ರಕ್ಷಾಕವಚ ತೆರೆಯಲು ಯತ್ನಿಸಿದ ಪ್ರಯಾಣಿಕ, ಎಫ್‌ಐಆರ್‌ ದಾಖಲು

ಪಿಟಿಐ
Published 29 ಜನವರಿ 2023, 10:49 IST
Last Updated 29 ಜನವರಿ 2023, 10:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ನಾಗ್ಪುರದಿಂದ ಮುಂಬೈಗೆ ಇಂಡಿಗೊ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನವು ಇಳಿಯುವ ವೇಳೆ ತುರ್ತು ನಿರ್ಗಮನದ ರಕ್ಷಾಕವಚವನ್ನು ತೆರೆಯಲು ಪ್ರಯತ್ನಿಸಿದರು ಎಂದು ವಿಮಾನಯಾನ ಸಂಸ್ಥೆ ಭಾನುವಾರ ಹೇಳಿದೆ.

‘ರಕ್ಷಾಕವಚ ತೆರೆಯಲು ಪ್ರಯತ್ನಿಸಿದ ಪ್ರಯಾಣಿಕನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಇಂಡಿಗೊ ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರಯಾಣಿಕನ ನಡೆ ಗಮನಿಸಿದ ವಿಮಾನದ ಸಿಬ್ಬಂದಿ ಕಾಪ್ಟನ್‌ನನ್ನು ಎಚ್ಚರಿಸಿದ್ದಾರೆ. ಈ ಕುರಿತು ಉಳಿದ ಪ್ರಯಾಣಿಕರಿಗೂ ಎಚ್ಚರಿಕೆ ನೀಡಲಾಗಿದೆ’ ಎಂದು ತಿಳಿಸಿರುವ ಇಂಡಿಗೊ, ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.