ಪಟ್ನಾ : ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ವಿರುದ್ಧ ಕೃತಿಚೌರ್ಯ ಮಾಡಿದ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
‘ಕಾಂಗ್ರೆಸ್ನ ದತ್ತಾಂಶ ವಿಶ್ಲೇಷಕ ಸಂಯೋಜಕ ಶಾಶ್ವತ್ ಗೌತಮ್ ಅವರ ಅಭಿವೃದ್ಧಿಪಡಿಸಿರುವ ವಿಷಯವನ್ನು ಕಿಶೋರ್ ತಮ್ಮ ಅಭಿಯಾನಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಪಾಟಲೀಪುತ್ರದ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ’ ಎಂದು ಠಾಣಾಧಿಕಾರಿ ಕಮಲೇಶ್ವರ ಪ್ರಸಾದ್ ಸಿಂಗ್ ಹೇಳಿದ್ದಾರೆ.
ಗೌತಮ್ ಪೊಲೀಸ್ ಠಾಣೆಗೆ ದೂರು ನೀಡಿ, ‘ನನ್ನ 'ಬಿಹಾರ್ ಕಿ ಬಾತ್' ಕಾರ್ಯಕ್ರಮವನ್ನು ಪ್ರಶಾಂತ್ ಯಥಾವತ್ತಾಗಿ ಕಾಪಿ ಮಾಡಿ 'ಬಾತ್ ಕಿ ಬಿಹಾರ್' ಎಂದು ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ. ಗೌತಮ್ ತಮ್ಮ ಸ್ಮೇಹಿತ ಒಸಾಮ ಎಂಬುವರ ವಿರುದ್ಧವೂ ಆರೋಪ ಮಾಡಿದ್ದು, ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.