ಮುಂಬೈ: ಲಾಕ್ಡೌನ್ ನಡುವೆಯೂ ಜನರನ್ನು ಗುಂಪು ಸೇರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವವಾರ್ಧಾ ಜಿಲ್ಲೆಯ ಬಿಜೆಪಿ ಶಾಸಕ ದಾದಾರಾವ್ ಕೆಚೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಭಾನುವಾರ ಸುಮಾರು 200 ಜನರು ಇವರ ನಿವಾಸದ ಎದುರು ಗುಂಪು ಸೇರಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
‘ಯಾರನ್ನು ಮನೆಗೆ ಕರೆದಿರಲಿಲ್ಲ. ಪ್ರತಿವರ್ಷ ಹುಟ್ಟುಹಬ್ಬದಂದು ಬಡವರಿಗೆ ಪಡಿತರ ವಿತರಿಸುತ್ತೇನೆ. ಈ ಬಾರಿ 21 ಕುಟುಂಬಕ್ಕೆ ದಿನಸಿ ನೀಡುವ ಯೋಜನೆ ಇತ್ತು. ನಾನು ಎಲ್ಲರಿಗೂ ಉಚಿತ ದಿನಸಿ ನೀಡುತ್ತಿದ್ದೇನೆ ಎಂದು ಪ್ರತಿಪಕ್ಷಗಳು ಪಿತೂರಿ ನಡೆಸಿ, ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಜನರು ಸೇರಿದ್ದರು’ ಎಂದು ಶಾಸಕರು ತಿಳಿಸಿದ್ದಾರೆ.ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ
ವಾದ್ರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.