ADVERTISEMENT

ಪಟಾಕಿ ದುರಂತ; ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಘೋಷಣೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 11:44 IST
Last Updated 12 ಫೆಬ್ರುವರಿ 2021, 11:44 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿರುವ ಸ್ಫೋಟ ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕಾಗಿ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿಯನ್ನು ಘೋಷಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಯು ಟ್ವೀಟ್ ಮಾಡಿದೆ.

ತಮಿಳುನಾಡಿನ ವಿರುಧುನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಘಟನೆಯು ಅತೀವ ದುಃಖಕರವಾಗಿದೆ. ದುಃಖತಪ್ತ ಕುಟುಂಬದವರೊಂದಿಗೆ ನಾನು ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ನೆರವು ಮಾಡಲು ಅಧಿಕಾರಿಗಳು ಪರಿಶ್ರಮ ವಹಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿಕೆಯನ್ನು ಟ್ವೀಟ್ ಮಾಡಿದೆ.

ADVERTISEMENT

ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪಟಾಕಿ ಕಾರ್ಖಾನೆ ಬೆಂಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ಎರಡು ಲಕ್ಷ ರೂ.ಗಳನ್ನು ಘೋಷಿಸಲಾಗಿದೆ. ಹಾಗೆಯೇ ಗಂಭೀರ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.