ADVERTISEMENT

ದೆಹಲಿಯ ದೀನದಯಾಳ್ ಅಂತ್ಯೋದಯ ಭವನದಲ್ಲಿ ಬೆಂಕಿ ಅವಘಡ: ಸಿಐಎಸ್‌ಎಫ್‌ ಅಧಿಕಾರಿ ಸಾವು

ಸರ್ಕಾರಿ ಕಡತಗಳು ಭಸ್ಮ

ಏಜೆನ್ಸೀಸ್
Published 6 ಮಾರ್ಚ್ 2019, 11:15 IST
Last Updated 6 ಮಾರ್ಚ್ 2019, 11:15 IST
   

ನವದೆಹಲಿ:ದಕ್ಷಿಣ ದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಪಂಡಿತ್‌ ದೀನ್‌ ದಯಾಳ್‌ ಅಂತ್ಯೋದಯ ಭವನದ ಐದನೇ ಮಹಡಿಯಲ್ಲಿ ಬುಧವಾರ ಅಗ್ನಿ ಅನಾಹುತ ಸಂಭವಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಸಿಐಎಸ್‌ಎಫ್‌ ಸಬ್‌ ಇನ್‌ಸ್ಪೆಕ್ಟರ್‌ ಎಂ.ಪಿ.ಗೋದಾರಾ (53) ಮೃತಪಟ್ಟವರು. ಸಾಮಾಜಿಕ ನ್ಯಾಯ ಸಚಿವಾಲಯದ ಕಚೇರಿಯಿದ್ದ ಅಂತಸ್ತಿನಲ್ಲಿ ಹೊಗೆ ಕಂಡ ಕೂಡಲೇ ಗೋದಾರ ಅವರು ಹಾಗೂ ಸಿಐಎಸ್‌ಎಫ್‌ ಸಿಬ್ಬಂದಿ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಷಾನಿಲ ಸೇವನೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಗೋದಾರ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.

ADVERTISEMENT

11 ಅಂತಸ್ತಿನ ಕಟ್ಟಡದಲ್ಲಿ ಹಲವು ಸರ್ಕಾರಿ ಕಚೇರಿಗಳಿವೆ. ಸಾಮಾಜಿಕ ನ್ಯಾಯ ಸಚಿವಾಲಯದ ಹಲವು ಪ್ರಮುಖ ಕಡತಗಳು ಹಾಗೂ ದಾಖಲೆಗಳು ಭಸ್ಮವಾಗಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.