ನಗರಕರ್ನೂಲ್ (ತೆಲಂಗಾಣ): ನಗರಕರ್ನೂಲ್ ಜಿಲ್ಲೆಯ ಡೊಮಲಪೆಂಟಾ ಹತ್ತಿರದ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಕಾಳ್ಗಿಚ್ಚು ಸಂಭವಿಸಿದೆ.
ಜಿಲ್ಲಾ ಅರಣ್ಯಾಧಿಕಾರಿ ಕೃಷ್ಣ ಗೌಡ್ ಅವರು ಈ ಸಂಬಂಧ ಮಾಹಿತಿ ನೀಡಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ʼಅರಣ್ಯಾಧಿಕಾರಿಗಳಿಗೆ ರಾತ್ರಿ 11.30ಕ್ಕೆ ವಿಚಾರ ತಿಳಿದ ಕೂಡಲೇ10 ಅಗ್ನಿಶಾಮಕ ಸಿಬ್ಬಂದಿಯನ್ನೊಳಗೊಂಡ ಎರಡು ತಂಡ ಸ್ಥಳಕ್ಕೆ ಧಾವಿಸಿದವು. ಬೆಂಕಿ ನಂದಿಸುವ ಕಾರ್ಯ ತಡರಾತ್ರಿ 2.30 ರವರೆಗೂನಡೆಯಿತು. ಒಣ ಹುಲ್ಲಿನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನಷ್ಟ ಸಂಭವಿಸಿದೆʼ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.