ಉದಕಮಂಡಲ, ತಮಿಳುನಾಡು:ನೀಲಗಿರೀಸ್ ಜಿಲ್ಲೆಯ ಕೂನೂರು ಬಳಿಯ ಅರುವಂಕಾಡುವಿನಲ್ಲಿರುವ ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ವೆಲ್ಡಿಂಗ್ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ ತಕ್ಷಣ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇದೇ ತಿಂಗಳ 18ರಂದು ಕಾರ್ಡೈಟ್ ವಿಭಾಗದಲ್ಲೂ ಸ್ಫೋಟ ಸಂಭವಿಸಿ 8 ಮಂದಿ ಗಾಯಗೊಂಡಿದ್ದರು. ಈ ಕುರಿತ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.