ADVERTISEMENT

ವಿರಾರ್‌ ಆಸ್ಪತ್ರೆ ದುರಂತ: ಸಿಇಒ, ಸಿಎಒ ಬಂಧನ

ಪಿಟಿಐ
Published 25 ಏಪ್ರಿಲ್ 2021, 13:43 IST
Last Updated 25 ಏಪ್ರಿಲ್ 2021, 13:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಿರಾರ್‌: ಪಾಲ್ಘರ್ ಜಿಲ್ಲೆಯ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದ ಸಂಬಂಧ, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಮುಖ್ಯ ಆಡಳಿತಾಧಿಕಾರಿಯನ್ನು ಭಾನುವಾರ ಬಂಧಿಸಲಾಗಿದೆ.

ಬಂಧಿತರಾದ ಸಿಇಒ ಡಾ. ದಿಲೀಪ್‌ ಬಸ್ತಿಮಾಲ್‌ ಶಾ (56) ಮತ್ತು ಸಿಎಒ ಡಾ. ಶೈಲೇಶ್‌ ಧರ್ಮದೇವ್‌ ಪಾಠಕ್‌ (47) ಅವರನ್ನು ವಾಸೈ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಇಬ್ಬರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಲಯ ಪೊಲೀಸ್‌ ಕಸ್ಟಡಿಗೆ ನೀಡಿದೆ.

ನಿರ್ಲಕ್ಷ್ಯ ಮತ್ತು ಅಗ್ನಿಶಾಮಕ ಸುರಕ್ಷತೆಯ ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮೀರಾ-ಭಯಾಂದರ್ ವಾಸೈ-ವಿರಾರ್ ಕ್ರೈಂ ಬ್ರ್ಯಾಂಚ್ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ಈ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ, 15 ಕೋವಿಡ್‌ ಪೀಡಿತರು ಮೃತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.