ಸಾಂದರ್ಭಿಕ ಚಿತ್ರ
ಅರಿಯಾಲೂರು (ತಮಿಳುನಾಡು): ಅರಿಯಾಲೂರು ಜಿಲ್ಲೆಯ ಪಟಾಕಿ ಘಟಕವೊಂದರಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ.
ಅರಿಯಾಲೂರು ಜಿಲ್ಲೆಯ ವೀರಾಗಲೂರು ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ತಲಾ ₹ 3 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
‘ಅವಘಡದಲ್ಲಿ ಗಾಯಗೊಂಡವರನ್ನು ತಂಜಾವೂರಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅವರಿಗೆ ವಿಶೇಷ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ಚಟುವಟಿಕೆಗಳನ್ನು ತ್ವರಿತಗೊಳಿಸಲು ಸಚಿವರಾದ ಎಸ್. ಎಸ್. ಶಿವಶಂಕರ್ ಮತ್ತು ಸಿ.ವಿ. ಗಣೇಶನ್ ಅವರನ್ನು ನಿಯೋಜಿಸಲಾಗಿದೆ.’ ಎಂದು ಸ್ಟಾಲಿನ್ ಹೇಳಿದ್ದಾರೆ.
ಮೊನ್ನೆಯಷ್ಟೇ ಕರ್ನಾಟಕದ ಅತ್ತಿಬೆಲೆ ಬಳಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ 14 ಜನ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.