ADVERTISEMENT

ಕೇರಳ ವಿಧಾನಸಭೆ: ಮಾವ–ಅಳಿಯ ಜುಗಲ್‌ಬಂದಿ, ಚೆನ್ನಿತ್ತಾಲ ಮೂಲೆಗುಂಪು

ಪಿಟಿಐ
Published 23 ಮೇ 2021, 16:38 IST
Last Updated 23 ಮೇ 2021, 16:38 IST
ಪಿಣರಾಯಿ ವಿಜಯನ್‌
ಪಿಣರಾಯಿ ವಿಜಯನ್‌   

ತಿರುವನಂತಪುರಂ: ಕೇರಳದ 15ನೇ ವಿಧಾನಸಭೆಯ ಪ್ರಥಮ ಅಧಿವೇಶನ ಸೋಮವಾರ ಆರಂಭವಾಗಲಿದೆ. ಕೇರಳದ ನಾಲ್ಕು ದಶಕಗಳ ಇತಿಹಾಸದಲ್ಲಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌. ಹೀಗಾಗಿ ಈ ಅಧಿವೇಶನಕ್ಕೆ ವಿಶೇಷ ಮಹತ್ವ ದೊರೆತಿದೆ.

ಮುಖ್ಯಮಂತ್ರಿ ಜೊತೆಗೆ ಸಚಿವರು ಆಗಿರುವ ಅವರ ಅಳಿಯ ಪಿ.ಎ.ಮೊಹಮ್ಮದ್‌ ರಿಯಾಸ್‌ ಅವರು ಒಟ್ಟಿಗೇ ಅಧಿವೇಶದದಲ್ಲಿ ಕಾಣಿಸಿಕೊಳ್ಳುವುದು ಹಾಗೂ ಮೂವರು ಮಹಿಳಾ ಸಚಿವರಿರುವುದು 15ನೇ ವಿಧಾನಸಭೆಯ ಮತ್ತೊಂದು ವಿಶೇಷ. ವಿರೋಧ ಪಕ್ಷದ ನಾಯಕ ಸ್ಥಾನದಿಂದ ರಮೇಶ್‌ ಚೆನ್ನಿತ್ತಾಲ ತೆರವುಗೊಳ್ಳುತ್ತಿರುವುದೂ ಕುತೂಹಲ ಮೂಡಿಸಿದೆ.

ಮೊದಲ ದಿನ ನೂತನ ಶಾಸಕರು ಪ್ರಮಾಣ ಸ್ವೀಕರಿಸಲಿದ್ದು, ಹಂಗಾಮಿ ಸ್ಪೀಕರ್ ಆಗಿ ಶಾಸಕ ಪಿ.ಟಿ.ಎ ರಹೀಂ ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್ ಆಯ್ಕೆಗೆ 25ರಂದು ಚುನಾವಣೆ ನಡೆಯಲಿದೆ. ಆಡಳಿತರೂಡ ಎಲ್‌ಡಿಎಫ್‌ ಸ್ಪೀಕರ್ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ತ್ರಿಥಲಾ ಕ್ಷೇತ್ರದ ಶಾಸಕ ಎಂ.ಬಿ.ರಾಜೇಶ್ ಅವರನ್ನು ಹೆಸರಿಸಿದ್ದರೆ, ವಿರೋಧಪಕ್ಷವಾಗಿರುವ ಕಾಂಗ್ರೆಸ್‌ ಇನ್ನೂ ತನ್ನ ಅಭ್ಯರ್ಥಿಯನ್ನು ಹೆಸರಿಸಿಲ್ಲ.

ADVERTISEMENT

ವಿರೋಧಪಕ್ಷದ ಕಡೆಯು ಸಾಕಷ್ಟು ಬದಲಾವಣೆಯಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಹಿರಿಯ ನಾಯಕ ರಮೇಶ್ ಚೆನ್ನಿತ್ತಾಲ ಬದಲಿಗೆ ವಿ.ಡಿ.ಸತೀಶನ್‌ ಮುನ್ನಡೆಸುವರು. 14ನೇ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮತ್ತು ವಿರೋಧಪಕ್ಷದ ನಾಯಕ ಚೆನ್ನಿತ್ತಾಲ ನಡುವೆ ವಿವಿಧ ವಿಷಯಗಳಲ್ಲಿ ವಾಗ್ವಾದ ಸಾಮಾನ್ಯವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.