ADVERTISEMENT

ಮಧ್ಯಪ್ರದೇಶ: ಟ್ರಕ್ ಪಲ್ಟಿಯಾಗಿ ಐವರು ಕಾರ್ಮಿಕರು ಸಾವು, 11 ಮಂದಿಗೆ ಗಾಯ

ಏಜೆನ್ಸೀಸ್
Published 10 ಮೇ 2020, 1:57 IST
Last Updated 10 ಮೇ 2020, 1:57 IST
ಅಪಘಾತದ ಕುರಿತು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ಮಾಹಿತಿ ನೀಡಿದರು –ಎಎನ್‌ಐ ಚಿತ್ರ
ಅಪಘಾತದ ಕುರಿತು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ಮಾಹಿತಿ ನೀಡಿದರು –ಎಎನ್‌ಐ ಚಿತ್ರ   

ಭೋಪಾಲ್: ಮಧ್ಯಪ್ರದೇಶದ ನರಸಿಂಗಪುರದ ಪಥಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಟ್ರಕ್ ಪಲ್ಟಿಯಾಗಿ ಐವರು ಕಾರ್ಮಿಕರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ. ಔರಂಗಾಬಾದ್ ರೈಲು ದುರಂತದಲ್ಲಿ 16 ಕಾರ್ಮಿಕರು ಮೃತಪಟ್ಟ ಕಹಿ ನೆನಪು ಮಾಸುವ ಮುನ್ನವೇ ಈ ಘಟನೆ ಸಂಭವಿಸಿದೆ.

‘ಮಾವಿನ ಹಣ್ಣು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಒಟ್ಟು 18 ಕಾರ್ಮಿಕರು ಇದ್ದರು’ ಎಂದು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ತಿಳಿಸಿದ್ದಾರೆ.

ಕಾರ್ಮಿಕರು ತೆಲಂಗಾಣದ ಹೈದರಾಬಾದ್‌ನಿಂದ ಉತ್ತರ ಪ್ರದೇಶದ ಆಗ್ರಾಕ್ಕೆ ತೆರಳುತ್ತಿದ್ದರು ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.