ADVERTISEMENT

ಮಧ್ಯಪ್ರದೇಶ: ಟ್ರಕ್ ಪಲ್ಟಿಯಾಗಿ ಐವರು ಕಾರ್ಮಿಕರು ಸಾವು, 11 ಮಂದಿಗೆ ಗಾಯ

ಏಜೆನ್ಸೀಸ್
Published 10 ಮೇ 2020, 1:57 IST
Last Updated 10 ಮೇ 2020, 1:57 IST
ಅಪಘಾತದ ಕುರಿತು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ಮಾಹಿತಿ ನೀಡಿದರು –ಎಎನ್‌ಐ ಚಿತ್ರ
ಅಪಘಾತದ ಕುರಿತು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ಮಾಹಿತಿ ನೀಡಿದರು –ಎಎನ್‌ಐ ಚಿತ್ರ   

ಭೋಪಾಲ್: ಮಧ್ಯಪ್ರದೇಶದ ನರಸಿಂಗಪುರದ ಪಥಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಟ್ರಕ್ ಪಲ್ಟಿಯಾಗಿ ಐವರು ಕಾರ್ಮಿಕರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ. ಔರಂಗಾಬಾದ್ ರೈಲು ದುರಂತದಲ್ಲಿ 16 ಕಾರ್ಮಿಕರು ಮೃತಪಟ್ಟ ಕಹಿ ನೆನಪು ಮಾಸುವ ಮುನ್ನವೇ ಈ ಘಟನೆ ಸಂಭವಿಸಿದೆ.

‘ಮಾವಿನ ಹಣ್ಣು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಒಟ್ಟು 18 ಕಾರ್ಮಿಕರು ಇದ್ದರು’ ಎಂದು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ತಿಳಿಸಿದ್ದಾರೆ.

ಕಾರ್ಮಿಕರು ತೆಲಂಗಾಣದ ಹೈದರಾಬಾದ್‌ನಿಂದ ಉತ್ತರ ಪ್ರದೇಶದ ಆಗ್ರಾಕ್ಕೆ ತೆರಳುತ್ತಿದ್ದರು ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.