ADVERTISEMENT

ಪತ್ನಿ, ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಡಿಸೆಂಬರ್ 2021, 11:03 IST
Last Updated 20 ಡಿಸೆಂಬರ್ 2021, 11:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ‘ಪಿಟಿಐ‘ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಪಿಟಿಐಗೆ ಮಾಹಿತಿ ನೀಡಿರುವ ಪೊಲೀಸರು, ‘ಐವರು ಸದಸ್ಯರು ತಮ್ಮದೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬದ ಮುಖ್ಯಸ್ಥ ತನ್ನ ಹೆಂಡತಿ ಮತ್ತು ಮೂವರು ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ‘ ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ಆದೇಶಿಸಲಾಗಿದ್ದು, ಈ ಸಾವುಗಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.